ಪೋಸ್ಟ್‌ಗಳು

ಫೆಬ್ರವರಿ, 2015 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪೌರಾಣಿಕ-ಲೇಖನ : ಏಕಲವ್ಯ (ಓ ಮನಸೇ)

ಇಮೇಜ್
ಮಹಾಭಾರತ ಎಂದರೆ ಎಲ್ಲರೂ ಬರೇ ದಾಯಾದಿಗಳ ದ್ವೇಷದ ಕಥೆ ಅಂತಲೇ ತಿಳಿಯುತ್ತಾರೆ. ಅದರ ಹಿಂದಿನ ಸತ್ಯ ಯಾರಿಗೂ ಬೇಕಿಲ್ಲ. ಏಕಲವ್ಯನ ಬಗ್ಗೆಯೂ ಹಾಗೆಯೇ ತಿಳಿಯುತ್ತಾರೆ. ದ್ರೋಣರು ಅರ್ಜುನನ ಮೇಲಿನ ಪ್ರೀತಿಯಿಂದ, ತಮ್ಮ ಮೆಚ್ಚಿನ ಶಿಷ್ಯನಾದ ಅರ್ಜುನನನ್ನು ಮಾತ್ರವೇ ಅಪ್ರತಿಮ ಬಿಲ್ಲುಗಾರನನ್ನಾಗಿಸುವ ಏಕಮಾತ್ರ ಕಾರಣದಿಂದಾಗಿ ಏಕಲವ್ಯನಿಂದ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ಪಡೆದರು ಅಂತ. ಆದರೆ ವಾಸ್ತವ ಬೇರೆಯೇ ಇದೆ. ಮಹಾಭಾರತದ ಸಮಯದಲ್ಲಿ ಹಸ್ತಿನಾವತಿಯನ್ನು ದುರ್ಯೋಧನ ಆಳುತ್ತಿದ್ದ. ಎಲ್ಲ ರೀತಿಯಿಂದ ಅರ್ಹರಾಗಿದ್ದ ಪಾಂಡವರು ಕಾಡಿನಲ್ಲಿದ್ದರು. ದುರ್ಯೋಧನನ ನಿಯಮದಂತೆ ಪಾಂಡವರು ವನವಾಸ, ಅಜ್ಞಾತವಾಸ ಮುಗಿಸಿ ಬಂದರೂ ದುರ್ಯೋಧನ ಅವರಿಗೆ ಅವರ ನೆಲ ಕೊಡಲಿಲ್ಲ. ಹಾಗಾಗಿ ಯುದ್ಧ ನಡೆಯಿತು. ಹಾಗಾದರೆ ಕೇವಲ ನೆಲಕ್ಕಾಗಿ ಯುದ್ಧ ನಡೆಯಿತೇ? ಖಂಡಿತಾ ಇಲ್ಲ. ಪಾಂಡವರು ತಮ್ಮ ನೆಲವನ್ನು ವಾಪಸ್ ಪಡೆಯದಿದ್ದರೆ ಯುಗಾಂತರದವರೆಗೂ ದುರ್ಯೋಧನನ ವಂಶಸ್ಥರೇ ಭರತ ಭೂಮಿಯನ್ನು ಆಳುತ್ತಿದ್ದರು. ಆಗ ಭೂಮಿಯಲ್ಲಿ ಕೇವಲ ಅಧರ್ಮವೇ ತಾಂಡವವಾಡುತ್ತಿತ್ತು. ಅದನ್ನು ತಪ್ಪಿಸಿ ಭೂಮಿಯಲ್ಲಿ ಧರ್ಮ ನೆಲೆಸುವಂತೆ ಮಾಡಲು ಹಸ್ತಿನಾವತಿ ಪಾಂಡವರಿಗೆ ದೊರೆಕಲೇ ಬೇಕಿತ್ತು. ಅದೂ ನ್ಯಾಯಯುತವಾಗಿ ಅವರದನ್ನು ಪಡೆಯಬೇಕಿತ್ತು. ಈ ನಿಟ್ಟಿನಲ್ಲಿ ಐವರು ಪಾಂಡವರೂ ಒಬ್ಬೊಬ್ಬರೂ ಒಂದೊಂದು ವಿದ್ಯೆಯಲ್ಲಿ ನಿಷ್ಣಾತರಾಗಿದ್ದರು. ಅವರಲ್ಲಿ ಅರ್ಜುನ ಬಿಲ್ಲುಗ