ಕೋಡಿಮಠದ ಶಾಸನದ ಭಾಷಿಕ ಮತ್ತು ಸಾಹಿತ್ಯಿಕ ಮಹತ್ವ
ಪೀಠಿಕೆ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯ ಕೇದಾರೇಶ್ವರ ದೇವಸ್ಥಾನದ ಪ್ರಾಕಾರದಲ್ಲಿ ಇರುವ ಅನೇಕ ಶಿಲಾಶಾಸನಗಳಲ್ಲಿ ಇದೂ ಒಂದು. ಶಾಸನ : ಕೋಡಿಮಠದ ಶಾಸನ ಶಾಸನ ದೊರೆತ ಸ್ಥಳ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆ ಶಾಸನದ ಕಾಲ : ಕ್ರಿ ಶ 12 ನೇ ಶತಮಾನ ಶಾಸನದ ಎತ್ತರ : 8 ಅಡಿ ಎತ್ತರ 4 ಅಡಿ 3 ಅಂಗುಲ ಅಗಲ ಕಂಡುಹಿಡಿದವರು : ಬಿ. ಎಲ್. ರೈಸ್ ಪ್ರಕಟಿಸಿದ ವರ್ಷ : 1902 ಶಾಸನವು ಶಿವನಮನದ ಮೂಲಕ ಆರಂಭವಾಗುತ್ತದೆ. ನಂತರ ಶಿವನು ದೊರೆ ಬಿಜ್ಜಳನ ಆಸೆಗಳನ್ನು ಪೂರೈಸಲಿ ಎಂಬ ಆಶಯ ಪದ್ಯವಿದೆ. ಕಲಚುರಿ ದೊರೆ ಬಿಜ್ಜಳನ ಬಿರುದುಗಳನ್ನು ಕೂಡ ಶಾಸನ ತಿಳಿಸುತ್ತದೆ. 'ಕಸಪಯ್ಯ ನಾಯಕ' ಬಿಜ್ಜಳನ ಕೈ ಕೆಳಗಿನ ಅಧಿಕಾರಿ. ಆತನನ್ನು ಬಣ್ಣಿಸುವ ಹಲವು ಪದ್ಯಗಳಿವೆ. ನಂತರ ಶಾಸನವು ಬಳ್ಳಿಗಾವೆಯ ಕೋಡಿಮಠದ ಶ್ರೇಷ್ಠತೆಯ ಬಗ್ಗೆ ತುಂಬಾ ಮನೋಹರವಾಗಿ ವರ್ಣಿಸುತ್ತದೆ. ದೊರೆ ಬಿಜ್ಜಳನು ದಕ್ಷಿಣದ ವಿಜಯ ಕೈಗೊಂಡು, ಬಳ್ಳಿಗಾವೆಯಲ್ಲಿ ಬೀಡು ಬಟ್ಟಾಗ ಎಲ್ಲಾ ಅಧಿಕಾರಿಗಳು ಒಂದುಗೂಡಿ ಬಿಜ್ಜಳನನ್ನು ಕಂಡರು. ಕಸಪಯ್ಯ ನಾಯಕನು ಮಠದ ಹಿರಿಮೆಯನ್ನು ದೊರೆಗೆ ತಿಳಿಸಿದನು. ನಂತರ ಅಂತಹ ಮಹಿಮಾನ್ವಿ