ಪೋಸ್ಟ್‌ಗಳು

ಪಿ.ಬಿ.ಷೆಲ್ಲಿಯ ಕಾವ್ಯ ಸಮರ್ಥನೆ

  ಕವಿ ಪರಿಚಯ  :  ಷೆಲ್ಲಿಯು ಇಂಗ್ಲೆಂಡಿನ ಒಂದು ಹಳ್ಳಿಯಲ್ಲಿ ಜನಿಸಿದ. ತಂದೆ ತಾಯಿಗೆ ಮೊದಲ ಮಗ ಷೆಲ್ಲಿ‌. ಹುಟ್ಟೂರಿನಲ್ಲಿಯೇ ಬಾಲ್ಯದ ವಿದ್ಯಾಭ್ಯಾಸ ಮುಗಿಸಿ  ಸಿಯಾನ್ ಹೌಸ್ ಅಕಾಡೆಮಿ  ಎಂಬ ಶಾಲೆ ಸೇರಿದ. ಅದ್ಭುತ ಪವಾಡದ ಕಥೆಗಳನ್ನು ಓದಿದ. ಸಹಪಾಠಿಗಳೊಂದಿಗೆ ಆಟಕ್ಕೆ ಸೇರದೇ ಶತಪಥ ತಿರುಗುತ್ತ ಚಿಂತನೆ ನಡೆಸಿದ. ಪರರ ದುಃಖ ಕಂಡು ಕಣ್ಣೀರು ಸುರಿಸುತ್ತಿದ್ದ.‌ ಪ್ರಕೃತಿ ಪ್ರೇಮಿಯಾಗಿದ್ದ. ಪುಸ್ತಕಗಳನ್ನು ಹೆಚ್ಚೆಚ್ಚು ಓದುತ್ತಿದ್ದ.  ನಂತರ  ಈಟಾನ್  ಎಂಬ ಶಾಲೆಗೆ ಸೇರಿದವನು, ಸಾರ್ವಜನಿಕ ಕಾರ್ಯಗಳಲ್ಲಿ ಭಾಗವಹಿಸಿದ. ರಸಾಯನ ಶಾಸ್ತ್ರದ ವ್ಯಾಸಂಗದ ಜೊತೆ ನಾಟಕದ ರಚನೆ, ಅಭಿನಯ ಸಹ ಮಾಡಿದ. ಆದರೂ ಅವನಿಗೆ ಪ್ರಯೋಗ ಶಾಲೆಯಲ್ಲಿ ರಸಾಯನ ಶಾಸ್ತ್ರದ ಪ್ರಯೋಗ ನಡೆಸುವುದೇ ಹೆಚ್ಚು ಇಷ್ಟದ ವಿಷಯವಾಗಿತ್ತು. "ರಾಜಕೀಯ ನ್ಯಾಯ" ಎಂಬ ಗ್ರಂಥದಿಂದ ಪ್ರೇರಿತನಾಗಿ ಕ್ರಾಂತಿಕಾರಕನಾಗಿ ಭಾಷಣ ಮಾಡಿದ. ಶಾಲೆಯ ವಿದ್ಯಾರ್ಥಿ ಸೇವಾ ಪದ್ಧತಿ ವಿರುದ್ಧ ತಿರುಗಿಬಿದ್ದ.  ಸ್ವಲ್ಪ ವರ್ಷಗಳಲ್ಲಿ " ನಾಸ್ತಿಕ್ಯದ ಅವಶ್ಯಕತೆ " ಎಂಬ ಕಿರುಹೊತ್ತಿಗೆ ಪ್ರಕಟಿಸಿದ. ಅದರಿಂದಾಗಿ ತಾನು ಓದುತ್ತಿದ್ದ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಹೊರದೂಡಲ್ಪಟ್ಟ.  ಲಂಡನ್ನಿಗೆ ಬಂದವನು ಹ್ಯಾರಿಯೆಟ್‌ಳನ್ನು ವಿವಾಹವಾದ.  ಲಂಡನ್ನಿನಲ್ಲಿ ವಿಲಿಯಂ ಗಾಡ್ವಿಯನ್ನು ಭೇಟಿ ಮಾಡಿದ. ನಂತರ ತತ್ವಾಭ್ಯಾಸದ ಫಲವಾಗಿ " ದೇವಾಸ್ತಿಕ್ಯದ ಖಂಡನೆ

ಶಾಸನ ಸಾಹಿತ್ಯದಲ್ಲಿ ದೇಕಬ್ಬೆ ಶಾಸನದ ಸ್ಥಾನ

ಪೀಠಿಕೆ :  ಶಾಸನಗಳಲ್ಲಿ ಹಲವು ಪ್ರಕಾರಗಳುಂಟು. ಅದರಲ್ಲಿ ಆತ್ಮಬಲಿಯೂ ಒಂದು. ಬೇರೆ ಬೇರೆ ಕಾರಣಗಳಿಗಾಗಿ ಪ್ರಾಣತ್ಯಾಗ ಮಾಡುತ್ತಿದ್ದ ಅನೇಕ ಉದಾಹರಣೆಗಳುಂಟು. ಅವರಿಗೆ ಹಾಕಿಸುತ್ತಿದ್ದ ಶಾಸನಗಳಿಗೆ ಸ್ಮಾರಕ ಶಾಸನ ಎಂದು ಹೆಸರು. ವೀರರ ಪತ್ನಿಯರು ಸಹಗಮನ ಪ್ರಕಾರ ಮರಣ ಹೊಂದುತ್ತಿದ್ದರು. ಆಗ ಅವರಿಗೆ ಹಾಕಿಸುತ್ತಿದ್ದ ಸ್ಮಾರಕಗಳನ್ನು ಮಹಾಸತಿಕಲ್ಲು ಅಥವಾ ಮಾಸ್ತಿಕಲ್ಲು ಎಂದು ಕರೆಯುತ್ತಿದ್ದರು.  "ದೇಕಬ್ಬೆಯ ಶಾಸನ ಅಂತಹಾ ಒಂದು ಮಾಸ್ತಿಕಲ್ಲು" ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಬೆಳತೂರು ಗ್ರಾಮದ ಅಡ್ಡಕಟ್ಟೆ ಹೊಲದಲ್ಲಿರುವ ಮಹಾಸತಿ ಶಾಸನವನ್ನು ಪತ್ತೆ ಹಚ್ಚಿದವರು  ಬಿ.ಎಲ್.ರೈಸ್. ' ಎಪಿಗ್ರಾಫಿಯಾ ಕರ್ನಾಟಿಕಾ'ದ ಎರಡನೇ ಎರಡನೇ ಸಂಪುಟದಲ್ಲಿ ಶಾಸನದ ಪಠ್ಯವನ್ನು ಪ್ರಕಟಿಸಿದರು.  ನಂತರ ರೆವೆರೆಂಡ್ ಕಿಟ್ಟೆಲ್ ರವರು ಈ ಶಾಸನವನ್ನು ಎಪಿಗ್ರಾಫಿಯಾ ಇಂಡಿಕಾ ದಲ್ಲಿ ಪ್ರಕಟಿಸಿದರು.  ಈ ಶಾಸನದ ವಿಶೇಷತೆಯೆಂದರೆ ಇದು ಬೇರೆ ಶಾಸನಗಳಂತೆ ದೇವತಾ ಶ್ಲೋಕದಿಂದ ಪ್ರಾರಂಭವಾಗುವುದಿಲ್ಲ. ಗದ್ಯಕ್ಕಿಂತ ಪದ್ಯಭಾಗವೇ ಇದರಲ್ಲಿ ಹೆಚ್ಚು. ಇದರಲ್ಲಿ ಒಟ್ಟು 23 ಪದ್ಯಗಳಿವೆ.  ದೇಕಬ್ಬೆಯು ತನ್ನ ಪತಿಯ ಮರಣದ ಸುದ್ದಿ ಕೇಳಿದ ತಕ್ಷಣ ಇಹಲೋಕವನ್ನು ತ್ಯಜಿಸಲು ಸಿದ್ಧಳಾದಳು. ಚಿತೆಯನ್ನು ಸಿದ್ಧಪಡಿಸಿ ಉರಿಯುತ್ತಿದ್ದ ಚಿತೆ ಹೊಕ್ಕಳು. ತನ್ನ ಮಗಳ ಸ್ಮಾರಕವಾಗಿ ಆಕೆಯ ತಂದೆ ಶಾಸನ ಸಹಿತವಾದ ಈ ಶಿಲಾಸ್ತಂಭವನ್ನು ಮಾಡಿಸಿದ. 

ಕೋಡಿಮಠದ ಶಾಸನದ ಭಾಷಿಕ ಮತ್ತು ಸಾಹಿತ್ಯಿಕ ಮಹತ್ವ

  ಪೀಠಿಕೆ :  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯ ಕೇದಾರೇಶ್ವರ ದೇವಸ್ಥಾನದ ಪ್ರಾಕಾರದಲ್ಲಿ ಇರುವ ಅನೇಕ ಶಿಲಾಶಾಸನಗಳಲ್ಲಿ ಇದೂ ಒಂದು.                    ಶಾಸನ    : ಕೋಡಿಮಠದ ಶಾಸನ ಶಾಸನ ದೊರೆತ ಸ್ಥಳ  : ಶಿವಮೊಗ್ಗ ಜಿಲ್ಲೆಯ                                     ಶಿಕಾರಿಪುರ                                   ತಾಲ್ಲೂಕಿನ ಬಳ್ಳಿಗಾವೆ         ಶಾಸನದ ಕಾಲ   : ಕ್ರಿ ಶ 12 ನೇ ಶತಮಾನ      ಶಾಸನದ ಎತ್ತರ    : 8 ಅಡಿ ಎತ್ತರ                                4  ಅಡಿ 3 ಅಂಗುಲ ಅಗಲ     ಕಂಡುಹಿಡಿದವರು   : ಬಿ. ಎಲ್. ರೈಸ್     ಪ್ರಕಟಿಸಿದ ವರ್ಷ    : 1902 ಶಾಸನವು ಶಿವನಮನದ ಮೂಲಕ ಆರಂಭವಾಗುತ್ತದೆ. ನಂತರ ಶಿವನು ದೊರೆ ಬಿಜ್ಜಳನ ಆಸೆಗಳನ್ನು ಪೂರೈಸಲಿ ಎಂಬ ಆಶಯ ಪದ್ಯವಿದೆ. ಕಲಚುರಿ ದೊರೆ ಬಿಜ್ಜಳನ ಬಿರುದುಗಳನ್ನು ಕೂಡ ಶಾಸನ ತಿಳಿಸುತ್ತದೆ.  'ಕಸಪಯ್ಯ ನಾಯಕ' ಬಿಜ್ಜಳನ ಕೈ ಕೆಳಗಿನ ಅಧಿಕಾರಿ. ಆತನನ್ನು ಬಣ್ಣಿಸುವ ಹಲವು ಪದ್ಯಗಳಿವೆ. ನಂತರ ಶಾಸನವು ಬಳ್ಳಿಗಾವೆಯ ಕೋಡಿಮಠದ ಶ್ರೇಷ್ಠತೆಯ ಬಗ್ಗೆ ತುಂಬಾ ಮನೋಹರವಾಗಿ ವರ್ಣಿಸುತ್ತದೆ. ದೊರೆ ಬಿಜ್ಜಳನು ದಕ್ಷಿಣದ ವಿಜಯ ಕೈಗೊಂಡು, ಬಳ್ಳಿಗಾವೆಯಲ್ಲಿ ಬೀಡು ಬಟ್ಟಾಗ ಎಲ್ಲಾ ಅಧಿಕಾರಿಗಳು ಒಂದುಗೂಡಿ ಬಿಜ್ಜಳನನ್ನು ಕಂಡರು.  ಕಸಪಯ್ಯ ನಾಯಕನು ಮಠದ ಹಿರಿಮೆಯನ್ನು ದೊರೆಗೆ ತಿಳಿಸಿದನು. ನಂತರ ಅಂತಹ ಮಹಿಮಾನ್ವಿ

ದೇಕಬ್ಬೆಯ ಶಾಸನದ ಹಿನ್ನೆಲೆಯಲ್ಲಿ ಸತಿ ಪದ್ಧತಿಯ ಪರಿಚಯ

ಪೀಠಿಕೆ :  ಪ್ರಸ್ತುತ ಶಾಸನದ ಕೇಂದ್ರ ವ್ಯಕ್ತಿಯಾದ ದೇಕಬ್ಬೆ ರವಿಗ ಮತ್ತು ಪೊನ್ನಕ್ಕರ ಮಗಳು. ಆಕೆ ವಿವಾಹವಾದುದು ನವಲೆನಾಡಿನ ಪ್ರಭುವಾದ ಏಚನನ್ನು. ಏಚ ತನ್ನ ಪತ್ನಿಯೊಡನೆ ಸುಖವಾಗಿ ಬಾಳುತ್ತಿದ್ದ. ಆತ ಒಬ್ಬ ಜಟ್ಟಿ, ಕುಸ್ತಿ ಪಟುವಾಗಿದ್ದ. ಯಾವುದೋ ಒಂದು ಸ್ಪರ್ಧೆಯಲ್ಲೋ ಅಥವಾ ಹೋರಾಟದಲ್ಲಿಯೋ ತನ್ನ ಎದುರಾಳಿಯನ್ನು ಏಚ ಇರಿದು ಕೊಂದುಬಿಟ್ಟ. ಅದಕ್ಕಾಗಿ ಆತನಿಗೆ ಮರಣದಂಡನೆ ಶಿಕ್ಷೆಯಾಯ್ತು. ಆತ ಮೃತನಾದ.  ದೇಕಬ್ಬೆಗೆ ಗಂಡನ ಸಾವಿನ ಸುದ್ದಿ ತಿಳಿದೊಡನೆ ಆಕೆ ಇಹಲೋಕವನ್ನು ತ್ಯಜಿಸಲು ನಿರ್ಧರಿಸಿದಳು.  ಚಿತೆಯನ್ನು ಸಿದ್ಧಪಡಿಸಲಾಯ್ತು.  ದೇಕಬ್ಬೆಯ ತಂದೆ, ತಾಯಿ, ಬಂಧು, ಬಳಗ, ಆಪ್ತೇಷ್ಟರು ಎಲ್ಲರೂ ಸೇರಿ ಆಕೆ ತನ್ನ ಸಂಕಲ್ಪ ಕೈ ಬಿಡುವಂತೆ ಪರಿಪರಿಯಾಗಿ ಬೇಡಿಕೊಂಡರು. ಕಾಲು ಹಿಡಿದು ಕೇಳಿಕೊಂಡರು.‌ ದೇಕಬ್ಬೆ ವಿಚಲಿತಳಾಗಲಿಲ್ಲ. ಕೊಟ್ಟ ಮನೆಗೂ ಸೇರಿದ ಮನೆಗೂ ಶೋಭೆ ತರದ ಕೆಲಸ ತಾನು ಮಾಡುವುದಿಲ್ಲ ಎಂದು ದೇಕಬ್ಬೆ ಹೇಳಿಬಿಟ್ಟಳು. ನಂತರ ಜನರಿಗೆ ತನ್ನಲ್ಲಿರುವ ಬಟ್ಟೆ, ಬರೆ, ಆಭರಣ, ಹಣ ಎಲ್ಲವನ್ನೂ ಜನರಿಗೆ ಹಂಚಿ, ಬರಿಗೈಯಲ್ಲಿ ದೇವರಿಗೆ ನಮಿಸಿ, ಉರಿಯುತ್ತಿದ್ದ ಚಿತೆ ಹೊಕ್ಕಳು ದೇಕಬ್ಬೆ. ನಂತರ ಸತಿಯಾದಳು. ಈ ಶಾಸನದಲ್ಲಿ ದೇಕಬ್ಬೆಯ ಗುಣ ಪ್ರಶಂಸೆ ಮಾಡಲಾಗಿದೆ. ತನ್ನ ಮಗಳ ಸ್ಮಾರಕವಾಗಿ ಶಾಸನ ಸಹಿತವಾದ ಶಿಲಾಸ್ತಂಭವನ್ನು ಮಾಡಿಸಿದ್ದು ಆಕೆಯ ತಂದೆ ರವಿಗ.  ಪತಿಯ ಶವದ ಜೊತೆಯಲ್ಲಿಯೇ ಚಿತೆಯೇರಿ ಮರಣ ಹೊಂದುವುದು  ಸಹಗಮನ .

ಕೋಡಿಮಠ ಒಂದು ಸಾಂಸ್ಕೃತಿಕ ಕೇಂದ್ರ

ಪೀಠಿಕೆ :  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯ ಕೇದಾರೇಶ್ವರ ದೇವಸ್ಥಾನದ ಪ್ರಾಕಾರದಲ್ಲಿ ಇರುವ ಅನೇಕ ಶಿಲಾಶಾಸನಗಳಲ್ಲಿ ಇದೂ ಒಂದು.                    ಶಾಸನ    : ಕೋಡಿಮಠದ ಶಾಸನ ಶಾಸನ ದೊರೆತ ಸ್ಥಳ  : ಶಿವಮೊಗ್ಗ ಜಿಲ್ಲೆಯ                                     ಶಿಕಾರಿಪುರ                                   ತಾಲ್ಲೂಕಿನ ಬಳ್ಳಿಗಾವೆ         ಶಾಸನದ ಕಾಲ  : ಕ್ರಿ ಶ 12 ನೇ ಶತಮಾನ      ಶಾಸನದ ಎತ್ತರ    : 8 ಅಡಿ ಎತ್ತರ                                4  ಅಡಿ 3 ಅಂಗುಲ ಅಗಲ     ಕಂಡುಹಿಡಿದವರು   : ಬಿ. ಎಲ್. ರೈಸ್     ಪ್ರಕಟಿಸಿದ ವರ್ಷ    : 1902 ಶಾಸನವು ಶಿವನಮನದ ಮೂಲಕ ಆರಂಭವಾಗುತ್ತದೆ.   ನಂತರ ಶಿವನು ದೊರೆ ಬಿಜ್ಜಳನ ಆಸೆಗಳನ್ನು ಪೂರೈಸಲಿ ಎಂಬ ಆಶಯ ಪದ್ಯವಿದೆ. ಕಲಚುರಿ ದೊರೆ ಬಿಜ್ಜಳನ ಬಿರುದುಗಳನ್ನು ಕೂಡ ಶಾಸನ ತಿಳಿಸುತ್ತದೆ.  'ಕಸಪಯ್ಯ ನಾಯಕ' ಬಿಜ್ಜಳನ ಕೈ ಕೆಳಗಿನ ಅಧಿಕಾರಿ. ಆತನನ್ನು ಬಣ್ಣಿಸುವ ಹಲವು ಪದ್ಯಗಳಿವೆ. ನಂತರ ಶಾಸನವು ಬಳ್ಳಿಗಾವೆಯ ಕೋಡಿಮಠದ ಶ್ರೇಷ್ಠತೆಯ ಬಗ್ಗೆ ತುಂಬಾ ಮನೋಹರವಾಗಿ ವರ್ಣಿಸುತ್ತದೆ. ದೊರೆ ಬಿಜ್ಜಳನು ದಕ್ಷಿಣದ ವಿಜಯ ಕೈಗೊಂಡು, ಬಳ್ಳಿಗಾವೆಯಲ್ಲಿ ಬೀಡು ಬಟ್ಟಾಗ ಎಲ್ಲಾ ಅಧಿಕಾರಿಗಳು ಒಂದುಗೂ

ದೇಕಬ್ಬೆ ಶಾಸನ : ಟಿಪ್ಪಣಿ

ಪ್ರಸ್ತುತ ಶಾಸನದ ಕೇಂದ್ರ ವ್ಯಕ್ತಿಯಾದ ದೇಕಬ್ಬೆ ರವಿಗ ಮತ್ತು ಪೊನ್ನಕ್ಕರ ಮಗಳು. ಆಕೆ ವಿವಾಹವಾದುದು ನವಲೆನಾಡಿನ ಪ್ರಭುವಾದ ಏಚನನ್ನು. ಏಚ ತನ್ನ ಪತ್ನಿಯೊಡನೆ ಸುಖವಾಗಿ ಬಾಳುತ್ತಿದ್ದ. ಆತ ಒಬ್ಬ ಜಟ್ಟಿ, ಕುಸ್ತಿ ಪಟುವಾಗಿದ್ದ. ಯಾವುದೋ ಒಂದು ಸ್ಪರ್ಧೆಯಲ್ಲೋ ಅಥವಾ ಹೋರಾಟದಲ್ಲಿಯೋ ತನ್ನ ಎದುರಾಳಿಯನ್ನು ಏಚ ಇರಿದು ಕೊಂದುಬಿಟ್ಟ. ಅದಕ್ಕಾಗಿ ಆತನಿಗೆ ಮರಣದಂಡನೆ ಶಿಕ್ಷೆಯಾಯ್ತು. ಆತ ಮೃತನಾದ.  ದೇಕಬ್ಬೆಗೆ ಗಂಡನ ಸಾವಿನ ಸುದ್ದಿ ತಿಳಿದೊಡನೆ ಆಕೆ ಇಹಲೋಕವನ್ನು ತ್ಯಜಿಸಲು ನಿರ್ಧರಿಸಿದಳು .  ಚಿತೆಯನ್ನು ಸಿದ್ಧಪಡಿಸಲಾಯ್ತು.  ದೇಕಬ್ಬೆಯ ತಂದೆ, ತಾಯಿ, ಬಂಧು, ಬಳಗ, ಆಪ್ತೇಷ್ಟರು ಎಲ್ಲರೂ ಸೇರಿ ಆಕೆ ತನ್ನ ಸಂಕಲ್ಪ ಕೈ ಬಿಡುವಂತೆ ಪರಿಪರಿಯಾಗಿ ಬೇಡಿಕೊಂಡರು. ಕಾಲು ಹಿಡಿದು ಕೇಳಿಕೊಂಡರು.‌ ದೇಕಬ್ಬೆ ವಿಚಲಿತಳಾಗಲಿಲ್ಲ. ಕೊಟ್ಟ ಮನೆಗೂ ಸೇರಿದ ಮನೆಗೂ ಶೋಭೆ ತರದ ಕೆಲಸ ತಾನು ಮಾಡುವುದಿಲ್ಲ ಎಂದು ದೇಕಬ್ಬೆ ಹೇಳಿಬಿಟ್ಟಳು. ನಂತರ ಜನರಿಗೆ ತನ್ನಲ್ಲಿರುವ ಬಟ್ಟೆ, ಬರೆ, ಆಭರಣ, ಹಣ ಎಲ್ಲವನ್ನೂ ಜನರಿಗೆ ಹಂಚಿ, ಬರಿಗೈಯಲ್ಲಿ ದೇವರಿಗೆ ನಮಿಸಿ, ಉರಿಯುತ್ತಿದ್ದ ಚಿತೆ ಹೊಕ್ಕಳು ದೇಕಬ್ಬೆ. ನಂತರ ಸತಿಯಾದಳು. ಈ ಶಾಸನದಲ್ಲಿ ದೇಕಬ್ಬೆಯ ಗುಣ ಪ್ರಶಂಸೆ ಮಾಡಲಾಗಿದೆ. ತನ್ನ ಮಗಳ ಸ್ಮಾರಕವಾಗಿ ಶಾಸನ ಸಹಿತವಾದ ಶಿಲಾಸ್ತಂಭವನ್ನು ಮಾಡಿಸಿದ್ದು ಆಕೆಯ ತಂದೆ ರವಿಗ.  ಪತಿಯ ಶವದ ಜೊತೆಯಲ್ಲಿಯೇ ಚಿತೆಯೇರಿ ಮರಣ ಹೊಂದುವುದು ಸಹಗಮನ . ಆ ದೃಷ್ಟಿಯಿಂದ ದೇಕಬ್ಬೆಯ

ಬಳ್ಳಿಗಾವೆಯ ಕೋಡಿಮಠದ ಶಾಸನ (ಟಿಪ್ಪಣಿ)

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯ ಕೇದಾರೇಶ್ವರ ದೇವಸ್ಥಾನದ ಪ್ರಾಕಾರದಲ್ಲಿ ಇರುವ ಅನೇಕ ಶಿಲಾಶಾಸನಗಳಲ್ಲಿ ಇದೂ ಒಂದು.                    ಶಾಸನ    : ಕೋಡಿಮಠದ ಶಾಸನ ಶಾಸನ ದೊರೆತ ಸ್ಥಳ : ಶಿವಮೊಗ್ಗ ಜಿಲ್ಲೆಯ                                     ಶಿಕಾರಿಪುರ                                   ತಾಲ್ಲೂಕಿನ ಬಳ್ಳಿಗಾವೆ         ಶಾಸನದ ಕಾಲ   : ಕ್ರಿ ಶ 12 ನೇ ಶತಮಾನ     ಶಾಸನದ ಎತ್ತರ    : 8 ಅಡಿ ಎತ್ತರ                                4  ಅಡಿ 3 ಅಂಗುಲ ಅಗಲ     ಕಂಡುಹಿಡಿದವರು   : ಬಿ. ಎಲ್. ರೈಸ್     ಪ್ರಕಟಿಸಿದ ವರ್ಷ    : 1902 ಶಾಸನವು ಶಿವನಮನದ ಮೂಲಕ ಆರಂಭವಾಗುತ್ತದೆ.  ನಂತರ ಶಿವನು ದೊರೆ ಬಿಜ್ಜಳನ ಆಸೆಗಳನ್ನು ಪೂರೈಸಲಿ ಎಂಬ ಆಶಯ ಪದ್ಯವಿದೆ. ಕಲಚುರಿ ದೊರೆ ಬಿಜ್ಜಳನ ಬಿರುದುಗಳನ್ನು ಕೂಡ ಶಾಸನ ತಿಳಿಸುತ್ತದೆ.  ' ಕಸಪಯ್ಯ ನಾಯಕ ' ಬಿಜ್ಜಳನ ಕೈ ಕೆಳಗಿನ ಅಧಿಕಾರಿ. ಆತನನ್ನು ಬಣ್ಣಿಸುವ ಹಲವು ಪದ್ಯಗಳಿವೆ. ನಂತರ ಶಾಸನವು ಬಳ್ಳಿಗಾವೆಯ ಕೋಡಿಮಠದ ಶ್ರೇಷ್ಠತೆಯ ಬಗ್ಗೆ ತುಂಬಾ ಮನೋಹರವಾಗಿ ವರ್ಣಿಸುತ್ತದೆ. ದೊರೆ ಬಿಜ್ಜಳನು ದಕ್ಷಿಣದ ವಿಜಯ ಕೈಗೊಂಡು, ಬಳ್ಳಿಗಾವೆಯಲ್ಲಿ ಬೀಡು ಬಟ್ಟಾಗ ಎಲ್ಲಾ ಅಧಿಕಾರಿಗಳು ಒಂದುಗೂಡಿ ಬಿಜ್ಜಳನನ್ನು ಕಂಡರು.  ಕಸಪಯ್ಯ ನಾಯಕನು ಮಠದ ಹಿರಿಮೆಯನ್ನು ದೊರೆಗೆ ತಿಳಿಸಿದನು. ನಂತರ ಅಂತಹ ಮಹಿಮಾನ್ವಿತ ಸ್ಥಳದಲ್ಲಿ ಧರ್ಮಕಾರ್ಯವೊಂದನ